ಕಾಸರಗೋಡು| ಬಸ್-ಕಾರು ಅಪಘಾತ: ಓರ್ವ ಮೃತ್ಯು

Update: 2023-02-03 04:06 GMT

ಕಾಸರಗೋಡು: ಬಸ್ ಮತ್ತು ಕಾರು ನಡುವೆ  ಉಂಟಾದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಪೆರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಪೆರಿಯ ನಡುವೆಟ್ಟ ಪಾರೆಯ ವೈಶಾಕ್ (30) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ  ಸಂಬಂಧಿಕರಾದ ಆರತಿ (26) ಎಂಬವರು ಗಂಭೀರ ಗಾಯಗಳಾಗಿದ್ದು, ಇವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ತಲಪಿಸಿದರೂ  ವೈಶಾಖ್ ಆಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಕಾಸರಗೋಡು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ ಎನ್ನಲಾಗಿದೆ.

ವೈಶಾಖ್  ಅವರು ಇಂಟರ್ ಲಾಕ್ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ  ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಾ ಳೆ. ಢಿಕ್ಕಿಯ ರಭಸಕ್ಕೆ ಬಸ್ ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರು ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Similar News