ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ ಪುನಶ್ಚೇತನ: ದೇವದಾರಿಯಲ್ಲಿ ಗಣಿಗಾರಿಕೆಗೆ ಅನುಮತಿ

Update: 2023-02-03 13:23 GMT

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು (ಕೆಐಒಸಿಎಲ್ )ಕಂಪನಿಗೆ ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಕಬ್ಬಿಣದ ಅದಿರು ಮತ್ತು ಮ್ಯಾಂಗನೀಸ್ ಅದಿರಿನ ಗಣಿಗಾರಿಕೆ ಮಾಡಲು, ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮತಿ ನೀಡಿದೆ ಎಂದು ಕೆಐಒಸಿಎಲ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಟಿ. ಸಾಮಿನಾಥನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

388 ಹೆಕ್ಟೇರ್  ಪ್ರದೇಶದಲ್ಲಿ 50 ವರ್ಷಗಳ ಅವಧಿಗೆ, ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನದ ನಿರ್ದೇಶಕರೊಂದಿಗೆ ಗಣಿಗಾರಿಕೆ ಗುತ್ತಿಗೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಾಮಿನಾಥನ್ ತಿಳಿಸಿದ್ದಾರೆ.

ದೇವದಾರಿ ಗಣಿ ಕಬ್ಬಿಣದ ಅದಿರು ಮತ್ತು ಮ್ಯಾಂಗನೀಸ್ ಅದಿರು ಗಣಿಗಾರಿಕೆ ಯೋಜನೆಗೆ 470 ಹೆಕ್ಟೇರ್ ಪ್ರದೇಶದಲ್ಲಿ 388 ಹೆಕ್ಟೇರ್ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಅಂತಿಮ ಹಂತ-IIರ ಅರಣ್ಯ ತೆರವು ಅನುಮೋದನೆಯನ್ನು ನೀಡಿದೆ. ಸ್ವಾಮಿಮಲೈ (SM) ಬ್ಲಾಕ್ ಫಾರೆಸ್ಟ್, ಸಂಡೂರ್ ತಾಲೂಕು, ಬಳ್ಳಾರಿ ಜಿಲ್ಲೆಯಲ್ಲಿ, 13.5761 ಹೆಕ್ಟೇರ್ ಜೊತೆಗೆ ಕನ್ವೇಯರ್ ಕಾರಿಡಾರ್, ಅಪ್ರೋಚ್ ರೋಡ್,ಪವರ್ ಟ್ರಾನ್ಸ್‌ಮಿಷನ್ ಲೈನ್/ವಾಟರ್ ಲೈನ್, ಒಟ್ಟು 401.5761 ಹೆಕ್ಟೇರ್ ನೀಡಿದೆ.

ಊದು ಕುಲುಮೆ ಘಟಕದ ವಿವರ: ಮಂಗಳೂರಿನ( ಬ್ಲಾಸ್ಟ್ ಫರ್ನೇಸ್) ಊದು ಕುಲುಮೆ ಘಟಕದಲ್ಲಿ 1.8 ಲಕ್ಷ ಟಿ ಪಿ ಎ ಸಾಮರ್ಥ್ಯದ ಕೋಕ್ ಓವನ್ ಪ್ಲಾಂಟ್ ನಿರ್ಮಾಣಕ್ಕೆ ಸಂಬಂಧಿಸಿದ ಚಟುವಟಿಕೆಗಳು ಪ್ರಗತಿಯಲ್ಲಿದೆ.

ಸಿ.ಎಸ್.ಆರ್ ಚಟುವಟಿಕೆಗಳು: 2022-23 ಸ್ಥಳೀಯ ಅಧಿಕಾರಿಗಳ ಸಹಯೋಗದೊಂದಿಗೆ ಸಿಎಸ್‌ಆರ್ ಎಲ್ಲಾ ಯೋಜನೆಗಳು ಮತ್ತು ಚಟುವಟಿಕೆಗಳ ಕಾರ್ಯಗತಗೊಳಿಸುವಿಕೆಯು  ಸುಗಮವಾಗಿ ನಡೆಯುತ್ತಿದೆ. ಒಟ್ಟು ಬಜೆಟ್‌ನಲ್ಲಿ, ಕಂಪನಿಯು ದಕ್ಷಿಣ ಕನ್ನಡ ಜಿಲ್ಲೆಯ  ಪ್ರದೇಶಗಳಲ್ಲಿ ವಿವಿಧ ಯೋಜನೆಗಳು ಚಟುವಟಿಕೆಗಳಿಗಾಗಿ ರೂ.2.22 ಕೋಟಿಗಳನ್ನು ಮೀಸಲಿಟ್ಟಿತ್ತು ಎಂದು ಸಾಮಿನಾಥನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆಐಒಸಿಎಲ್ ನಿರ್ದೇಶಕ (ಹಣಕಾಸು) ಬಿನಯ್ ಕೃಷ್ಣ ಮಹಾಪಾತ್ರ, ಹಿರಿಯ ವ್ಯವಸ್ಥಾಪಕ (ಎಚ್.ಆರ್) ಮುರುಗೇಶ್ ಉಪಸ್ಥಿತರಿದ್ದರು.

Similar News