ಶರಣ್ ಪಂಪ್‍ವೆಲ್ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒತ್ತಾಯ

Update: 2023-02-03 16:27 GMT

ಬೆಂಗಳೂರು, ಫೆ.3: ತುಮಕೂರಿನಲ್ಲಿ ಜ.28ರಂದು ನಡೆದ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್ತಿನ ಶರಣ್ ಪಂಪ್‍ವೆಲ್ ಪ್ರಚೋದನಾಕಾರಿ ಭಾಷಣವನ್ನು ಮಾಡಿದ್ದು, ಅವರ ವಿರುದ್ಧ ಕೂಡಲೆ ಕ್ರಮ ವಹಿಸಬೇಕು ಎಂದು ಸರಕಾರಕ್ಕೆ ದಲಿತ ಪರ ಸಂಘಟನೆಗಳು ಒತ್ತಾಯಿಸಿವೆ. 

ಶುಕ್ರವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ(ಭೀಮಾವಾದ)ದ ರಾಜ್ಯಾಧ್ಯಕ್ಷ ಆರ್.ಮೋಹನ್ ರಾಜ್, ಇತ್ತೀಚೆಗೆ ರಾಜಕೀಯ ಹಿನ್ನೆಲೆಯಲ್ಲಿ ಕೋಮುದ್ವೇಷ ಹರಡುವ ಭಾಷಣಗಳು ನಡೆಯುತ್ತಿವೆ. ಸೂರತ್ಕಲ್‍ನಲ್ಲಿ ಫಾಝಿಲ್ ಹತ್ಯೆಯನ್ನು ನಾವೇ ಮಾಡಿದ್ದೇವೆ ಎಂದು ಶರಣ್ ಪಂಪ್‍ವೆಲ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾನೆ. ಆದರೆ ಸರಕಾರ ಕ್ರಮ ವಹಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಟಿಯಲ್ಲಿ ಸ್ವಪ್ನ ಮೋಹನ್, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. 

Similar News