ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ: ಸಚಿವ ಕಾರಜೋಳ

Update: 2023-02-03 17:24 GMT

ಬೆಂಗಳೂರು, ಫೆ.3: ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಿದ್ದು, 100 ಜನ ಅಸಿಸ್ಟೆಂಟ್ ಇಂಜಿನಿಯರ್, 300 ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷದಿಂದ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ನೇಮಕ ಆಗಿಲ್ಲ. ಸಾವಿರ ಜನರ ಹುದ್ದೆ ನೇಮಕ ಆಗಬೇಕಿದೆ. ಇದರಿಂದ ಕಾಮಗಾರಿ ವಿಳಂಬ ಆಗುತ್ತಿದೆ ಎಂದರು.

ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಜೊತೆ ಮಾತನಾಡಿದ್ದೇನೆ. 400 ಜನರ ನೇಮಕಕ್ಕೆ ಅನುಮತಿ ನೀಡಿದ್ದಾರೆ. 300 ಜನ ಅಸಿಸ್ಟೆಂಟ್ ಇಂಜಿನಿಯರ್, ನೂರು ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು. ಸಿವಿಲ್ ಇಂಜಿನಿಯರ್ ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದರು.

ಹಣಕಾಸು ಇಲಾಖೆ ಒಪ್ಪಿಗೆ ಪಡೆದು ಅಧಿಸೂಚನೆ ಮಾಡಿಕೊಳ್ಳಬೇಕು. ಸ್ಪಷ್ಟವಾಗಿ ಅಭ್ಯರ್ಥಿಗಳಿಗೆ ಹೇಳಬೇಕು ಇದು ಗುತ್ತಿಗೆ ಆಧಾರಿತ ನೇಮಕ ಅಂತ. ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದು ಗೋವಿಂದ ಕಾರಜೋಳ ಹೇಳಿದರು.
 

Similar News