ಬ್ರಹ್ಮಾವರ: ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

Update: 2023-02-03 17:37 GMT

ಬ್ರಹ್ಮಾವರ: ಅಕ್ಕನ ಮನೆಯ ಗೃಹ ಪ್ರವೇಶಕ್ಕೆ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಫೆ.2ರಂದು ಮಧ್ಯಾಹ್ನ ವೇಳೆ ಚೇರ್ಕಾಡಿ ಗ್ರಾಮದ ಪೇತ್ರಿಯ ಕುದ್ಕುಂಜೆ ಎಂಬಲ್ಲಿ ನಡೆದಿದೆ.

ಮೃತರನ್ನು ಕುದ್ಕುಂಜೆ ನಿವಾಸಿ ರವಿರಾಜ್ ಟಿ.ಶೆಟ್ಟಿ(59) ಎಂದು ಗುರುತಿಸಲಾಗಿದೆ. ಇವರು ಅಕ್ಕನ ಮನೆಯ ಗೃಹ ಪ್ರವೇಶಕ್ಕೆ ಬಂದವರು ಮನೆಯಲ್ಲಿಯೇ ಇದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News