ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ ಪ್ರಭಾರಿಯಾಗಿ ಅಣ್ಣಾಮಲೈ ನೇಮಕ

Update: 2023-02-04 06:13 GMT

ಬೆಂಗಳೂರು: ಮುಂಬರಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಚುನಾವಣಾ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ. 

ಇದೇ ವರ್ಷ ಎಪ್ರಿಲ್ ಅಥವಾ ಮೇನಲ್ಲಿ  ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.  

Similar News