ಉಳ್ಳಾಲ: "ವೀರರಾಣಿ ಅಬ್ಬಕ್ಕ ಉತ್ಸವ 2022-23"

Update: 2023-02-04 09:54 GMT

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ  ಇದರ ಆಶ್ರಯದಲ್ಲಿ  "ವೀರರಾಣಿ ಅಬ್ಬಕ್ಕ ಉತ್ಸವ 2022-23" ಕಾರ್ಯಕ್ರಮವು ಉಳ್ಳಾಲ ನಗರ ಸಭೆ ಅಧೀನದಲ್ಲಿರುವ ಮಹಾತ್ಮ ಗಾಂಧಿ ರಂಗಮಂದಿರದಲ್ಲಿ ಶನಿವಾರ ನಡೆಯಿತು.

ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಸ್ವಾಂತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ಳನ್ನು ಗೌರವಿಸುವುದು ನಮ್ಮ ಕರ್ತವ್ಯ.  ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಬ್ಬಕ್ಕ ಉತ್ಸವ ಆಚರಿಸಿಕೊಂಡು ಬಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಿದೆ. ಇಂತಹ ಕಾರ್ಯಕ್ರಮ ನಿರಂತರ ನಡೆಯಲಿ ಎಂದು ಹಾರೈಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು. ಇದಕ್ಕೆ ನಮ್ಮ ‌ಪ್ರೋತ್ಸಾಹ ಸದಾ ಇರುತ್ತದೆ. ಅದೇ ರೀತಿ ಊರವರು ಪ್ರೋತ್ಸಾಹ ನೀಡಿದರೆ ಕಾರ್ಯಕ್ರಮ ಯಶಸ್ವಿ ಆಗಲು ಸಾಧ್ಯ ಎಂದರು.

ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮ ಉದ್ಘಾಟನೆ ಯನ್ನು ಚಲನಚಿತ್ರ ಕಲಾವಿದೆ ವಿದುಷಿ ಮಾನಸಿ ಸುಧೀರ್ ನೆರವೇರಿಸಿದರು. ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಆಶಯ ಭಾಷಣ ಮಾಡಿದರು. ಅಬ್ಬಕ್ಕ ಉತ್ಸವ ಸಮಿತಿ ಸ್ವಾಗತಾಧ್ಯಕ್ಷ  ಕೆ.ಜಯರಾಮಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪನೀರ್ ಧರ್ಮ ಗುರು ವಂ.ಫಾ.ವಿಕ್ಟರ್ ಡಿ ಮೆಲ್ಲೊ ಶುಭಾಶಂಸನೆ ಗೈದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್,ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ನಗರಸಭೆ ಅಧ್ಯಕ್ಷೆ ಚಿತ್ರ ಕಲಾ, ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ನಾಥ ರೈ, ಭಾರತೀಯ ತಿಯಾ ಸಮಾಜ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ್ ಪ.ಪಂ.ಮಾಜಿ ಉಪಾಧ್ಯಕ್ಷ  ಗಂಗಾಧರ ಉಳ್ಳಾಲ, ಮೊಗವೀರ ಸಂಘದ ಅಧ್ಯಕ್ಷ   ಮನೋಜ್ ಕುಮಾರ್ ಸಾಲ್ಯಾನ್, ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಗೌರವಾಧ್ಯಕ್ಷ ರಾದ ಸದಾನಂದ ಬಂಗೇರ, ಹೈದರ್ ಪೂರ್ತಿಪ್ಪಾಡಿ, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್ ಕೊಣಾಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ಚೆನ್ನಕೇಶವ, ಬ್ಯಾರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ನಝೀರ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.

ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಅತಿಥಿ ಗಳನ್ನು ಸ್ವಾಗತಿಸಿದರು. ಧನಲಕ್ಷ್ಮಿ ಗಟ್ಟಿ ವಂದಿಸಿದರು. ವಾಸುದೇವ ರಾವ್ ಕಾರ್ಯಕ್ರಮ ನಿರೂಪಿಸಿದರು. ರತ್ನಾವತಿ ಬೈಕಾಡಿ ನಾಡಗೀತೆ ಹಾಡಿದರು. ಕಾರ್ಯಕ್ರಮ ದ ಪ್ರಯುಕ್ತ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮೇಲ್ತೆನೆ ವತಿಯಿಂದ ಬ್ಯಾರಿ, ಲಘು ಸಂಗೀತ, ಗಾಯನ, ನೃತ್ಯ ವೈವಿಧ್ಯ, ಕೊಂಕಣಿ, ಬಹುಭಾಷಾ ಕವಿ ಕಾವ್ಯ ಗಾಯನ ಕಾರ್ಯಕ್ರಮ ನಡೆಯಿತು.

Similar News