ನಿವೇಶನ ಹಂಚಿಕೆಯಲ್ಲಿ ವಂಚನೆ ಆರೋಪ: ಬಿಜೆಪಿ ಎಂಎಲ್​ಸಿ ಆರ್​.ಶಂಕರ್​ ಪತ್ನಿ, ಪುತ್ರನ ವಿರುದ್ಧ FIR

Update: 2023-02-04 10:21 GMT

ಬೆಂಗಳೂರು: ಲೇಔಟ್​ ನಿವೇಶನ ಹಂಚಿಕೆಯಲ್ಲಿ ಪಾಲುದಾರನಿಗೆ ವಂಚನೆ ಮಾಡಿರುವ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಆರ್​.ಶಂಕರ್​ ಅವರ ಪತ್ನಿ ಮತ್ತು ಪುತ್ರನ ವಿರುದ್ಧ  ಪ್ರಕರಣ ದಾಖಲಾಗಿದೆ.

ಬಿಜೆಪಿ ಎಂಎಲ್​ಸಿ ಆರ್​. ಶಂಕರ್​ ಅವರ ಪತ್ನಿ ಧನಲಕ್ಷ್ಮಿ ಆರ್. ಶಂಕರ್ ಹಾಗೂ ಪುತ್ರ ಜ್ಯೋತಿರ್ ತೇಜೋಮಯಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಅಲ್ಲದೇ, ಇನ್ನೊರ್ವ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಅಕ್ರಮವಾಗಿ 23 ಸೈಟ್​ಗಳನ್ನು ಮಾರಾಟ ಮಾಡುವ ಮೂಲಕ ವಂಚನೆ ಮಾಡಿದ್ದಾರೆ ಎಂದು ಕಂಪೆನಿಯ ಪಾಲುದಾರರಾದ ಪ್ರಭಾವತಿ ಎಂಬುವರು ಇಂದಿರಾನಗರ ಠಾಣೆಗೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Similar News