ದ.ಭಾರತ ವಿಜ್ಞಾನ ವಸ್ತುಪ್ರದರ್ಶನ: ಸಿದ್ಧಾಪುರದ ಪೂರ್ಣಿಮಾ ಭಟ್ ಪ್ರಥವು

Update: 2023-02-04 10:32 GMT

ಕುಂದಾಪುರ, ಫೆ.4: ಕೇರಳದ ತ್ರಿಶೂರಿನಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಸಿದ್ಧಾಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಪೂರ್ಣಿಮಾ ಭಟ್ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಭಾರತ ಸರಕಾರದ ಸಂಸ್ಕೃತಿ ಸಚಿವಾಲಯ ನವದೆಹಲಿ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯ, ಬೆಂಗಳೂರು ಮತ್ತು ಕೇರಳ ಸರ್ಕಾರದ ಶಿಕ್ಷಣ ಸಚಿವಾಲಯವು ಜಂಟಿಯಾಗಿ ಈ ವಸ್ತು ಪ್ರದರ್ಶನವನ್ನು ಆಯೋಜಿಸಿದ್ದವು.

ವಸ್ತು ಪ್ರದರ್ಶನದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಪೂರ್ಣಿಮಾ ಭಟ್ ರೂಪಿಸಿದ ಗಣಿತದ ಸ್ವಕಲಿಕೆಯ ಸಾಮಗ್ರಿಗಳನ್ನು ತೀರ್ಪುಗಾರರು ಮೆಚ್ಚಿದ್ದರು. ಈ ವರ್ಷದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿಯೂ ಅವರ ಮಾರ್ಗದರ್ಶನದಲ್ಲಿ ಮಳೆ ನೀರು ಇಂಗಿಸುವ ಕುರಿತಾದ ಅಧ್ಯಯನ ನಡೆಸಿ ಶಾಲೆಯ ವಿದ್ಯಾರ್ಥಿನಿ ಶ್ರೀನಿಧಿ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

Similar News