ಕಾರ್ಕಳದಲ್ಲಿ ಸುನೀಲ್ ಕುಮಾರ್ ಇದ್ದಾರೆ...: ಮುತಾಲಿಕ್ ಸ್ಪರ್ಧೆ ಕುರಿತು ಸಿಎಂ ಬೊಮ್ಮಾಯಿ ಹೇಳಿದ್ದೇನು?

Update: 2023-02-04 13:16 GMT

ವಿಜಯಪುರ: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಕಾರ್ಕಾಳ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದೇ ಮುತಾಲಿಕ್ ಅವರನ್ನ ಬೆಂಬಲಿಸುವಂತೆ ಬಿಜೆಪಿ ನಾಯಕರನ್ನು ಶ್ರೀರಾಮಸೇನೆ ಒತ್ತಾಯಿಸಿದ್ದು, ಈ ಕುರಿತು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಶನಿವಾರ ಇಲ್ಲಿನ ಸೈನಿಕ್ ಸ್ಕೂಲ್ ಹೆಲಿಪ್ಯಾಡ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,   'ನಮ್ಮದು ರಾಷ್ಟ್ರೀಯ ಪಕ್ಷ, 224 ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುತ್ತೇವೆ. ಕಾರ್ಕಳದಲ್ಲಿ ಸಚಿವ ಸುನೀಲ್ ಕುಮಾರ್ ಅವರು ಮೂರು ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಮಂತ್ರಿ ಕೂಡ ಆಗಿದ್ದಾರೆ. ಶ್ರೀರಾಮ ಸೇನೆಯವರು ಮನವಿ ಮಾಡಿದ್ದಾರೆ, ಇದು ಸಹಜ ಎಂದು ಹೇಳಿದರು. 

ಆಂತರಿಕ ವಿಚಾರ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಗ್ಗೆ ಡಾ.ಪರಮೇಶ್ವರ್ ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದು ಅವರ ಆಂತರಿಕ ವಿಚಾರ. ಪರಮೇಶ್ವರ್ ಬಹಳ ಬುದ್ದಿವಂತರು. ಎಲ್ಲವನ್ನೂ ಅರಿತವರು. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಶಾಸಕರನ್ನು ಭದ್ರ ಮಾಡಿಕೊಳ್ಳಲಿ: ಸಿದ್ದರಾಮಯ್ಯ ತಾವು ಪ್ರವಾಸ ಮಾಡುತ್ತಿರುವ ಭಾಗದ ಶಾಸಕರನ್ನು ಗಟ್ಟಿಯಾಗಿ ಹಿಡಿದುಕೊಳ್ಳಲಿ. ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಅವರಿಗೆ ಇಷ್ಟೇ ಸಲಹೆ ನೀಡಲು ಸಾಧ್ಯ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಸಿದರು. 

ಇದನ್ನೂ ಓದಿಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸಿದಲ್ಲಿ ಸಿ.ಟಿ.ರವಿ ವಿರುದ್ಧವೂ ಸ್ಪರ್ಧೆ: ಶ್ರೀರಾಮಸೇನೆ ಎಚ್ಚರಿಕೆ

Similar News