ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

Update: 2023-02-06 07:01 GMT

ಬೆಂಗಳೂರು, ಫೆ, 6: ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಎಚ್.ಎಎಲ್ ವಿಮಾನ ನಿಲ್ದಾಣಕ್ಕೆ ಸೋಮವಾರ ಆಗಮಿಸಿದರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜು, ಶಾಸಕರಾದ ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಪೊಲೀಸ್ ಹಿರಿಯ ಅಧಿಕಾರಿಗಳು, ಅಧಿಕಾರಿಗಳು ಉಪಸ್ಥಿತಿತರಿದ್ದರು.

ಹೊಸದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿರುವ ಪ್ರಧಾನಿ ಮೋದಿ ಅವರು, ಮೊದಲಿಗೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ‘ಭಾರತ ಇಂಧನ ಸಪ್ತಾಹ-2023’ ಅನ್ನು ಉದ್ಘಾಟಿಸಲಿದ್ದಾರೆ. ಆ ಬಳಿಕ ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರತೆ’ ಸಾಧಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಳಿ 15 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಅತಿದೊಡ್ಡ ಹೆಲಿಕಾಪ್ಟರ್ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.

Full View

Similar News