ಕೆಮ್ತೂರು ತುಳು ನಾಟಕ ಸ್ಪರ್ಧೆ: ಪ್ರಶಸ್ತಿ ಪ್ರದಾನ

Update: 2023-02-06 11:45 GMT

ಉಡುಪಿ: ತುಳುಕೂಟ ಉಡುಪಿ ವತಿಯಿಂದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ, ಎಂಜಿಎಂ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ 21ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ ರವಿವಾರ ಎಂಜಿಎಂ ಕಾಲೇಜು ಮುದ್ದಣ ಮಂಟಪದಲ್ಲಿ ಜರಗಿತು.

ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ  ವಹಿಸಿದ್ದರು. ಮಣಿಪಾಲ ಕೆಎಂಸಿ ಡೀನ್ ಡಾ.ಪದ್ಮರಾಜ್ ಹೆಗ್ಡೆೆ, ಜಾನಪದ ವಿದ್ವಾಂಸ ಡಾ.ಬನ್ನಂಜೆ ಬಾಬು ಅಮೀನ್, ಉದ್ಯಮಿಗಳಾದ ಪುರುಷೊತ್ತಮ್ ಶೆಟ್ಟಿ, ಮನೋಹರ್ ಶೆಟ್ಟಿ, ವಿಶ್ವ ಸಂಸ್ಕೃತಿ ಪ್ರತಿಷ್ಠಾನ ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಕೆಮ್ತೂರು ಕುಟುಂಬದ ವಿಜಯ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ., ನಾಟಕ ಪರ್ಬ ಸಂಚಾಲಕ ಬಿ.ಪ್ರಭಾಕರ್ ಭಂಡಾರಿ ಉಪಸ್ಥಿಿತರಿದ್ದರು. ತುಳುಕೂಟ ಉಪಾಧ್ಯಕ್ಷ ದಿವಾಕರ್ ಸನಿಲ್ ಸ್ವಾಗತಿಸಿದರು. ಸಂಚಾಲಕಿ ತಾರಾ ಅಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಶಸ್ತಿ ವಿಜೇತ ಸುಮನಸಾ ಕೊಡವೂರು ತಂಡದ ವತಿಯಿಂದ ಸುಳಿ ಸುರುಳಿ ನಾಟಕ ಪ್ರದರ್ಶನಗೊಂಡಿತು.

Similar News