ಬೆಂಗಳೂರು: ತೆಂಗಿನ ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮರದ ಮೇಲೆಯೇ ಮೃತ್ಯು

Update: 2023-02-06 14:41 GMT

ಬೆಂಗಳೂರು, ಫೆ.6: ತೆಂಗಿನ ಮರ ಹತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮರದ ಮೇಲೆಯೇ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾರಾಯಣಪ್ಪ (60) ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.

ಸೋಮವಾರ (ಇಂದು) ಬೆಳಗ್ಗೆ 7.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮೈಲಸಂದ್ರದ ವಿಜಯಶ್ರೀ ಲೇಔಟ್‍ನ ವೆಂಕಟರಮಣ ದೇವಸ್ಥಾನದ ಸಮೀಪ ಸುಮಾರು 40 ಅಡಿ ಎತ್ತರದ ಮರದಲ್ಲಿ ತೆಂಗಿನ ಕಾಯಿ ಕೀಳಲು ನಾರಾಯಣಪ್ಪ ಹತ್ತಿ ತೆಂಗಿನ ಗರಿ ಮೇಲೆ ಕುಳಿತಿದ್ದಾರೆ. ಆ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ.

ಹಲವು ಬಾರಿ ಕೂಗಿದರು, ನಾರಾಯಣ ಕೆಳಗೆ ಇಳಿಯದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Similar News