ಸ್ಮಶಾನ ಜಾಗ ಒತ್ತುವರಿ: ನ್ಯಾ. ಶರ್ಮಿಳಾರಿಂದ ಪರಿಶೀಲನೆ

Update: 2023-02-06 15:33 GMT

ಉಡುಪಿ: ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ನೀಡಿದ ನಿರ್ದೇಶನದಂತೆ, ರಾಜ್ಯಾದ್ಯಂತ ಸ್ಮಶಾನ ಭೂಮಿಗಳ ಒತ್ತುವರಿ ಬಗ್ಗೆ ಜಿಲ್ಲೆಯ ನ್ಯಾಯಾಧೀಶರಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಅದರಂತೆ ಉಡುಪಿ ಜಿಲ್ಲೆಯಲ್ಲಿರುವ ಒಟ್ಟು 313 ಸ್ಮಶಾನ ಮತ್ತು ಸ್ಮಶಾನಕ್ಕೆ ಕಾಯ್ದಿರಿಸಿದ ಭೂಮಿಗಳ ಒತ್ತುವರಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಅವರು ಸೋಮವಾರ ಉಡುಪಿ ತಾಲೂಕಿನ ಸ್ಮಶಾನ ಮತ್ತು ಸ್ಮಶಾನಕ್ಕೆ ಕಾಯ್ದಿರಿಸಿದ ಭೂಮಿಗಳ ಒತ್ತುವರಿ ಬಗ್ಗೆ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು.

ತಾವು ಇಂದು ಪರಿಶೀಲನೆ ನಡೆಸಿದ ಸ್ಮಶಾನಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತುವರಿ ಕಂಡು ಬಂದಿಲ್ಲ ಎಂದು ಶರ್ಮಿಳಾ ತಿಳಿಸಿದ್ದಾರೆ. ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಈ ಪರಿಶೀಲನಾ ಕಾರ್ಯದಲ್ಲಿ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿಗಳೂ ಸಹ ಭಾಗವಹಿಸುತ್ತಿದ್ದಾರೆ.

Similar News