ನಂಜನಗೂಡು | ಠಾಣೆ ಎದುರೇ ಪೊಲೀಸ್ ಜೀಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2023-02-06 17:08 GMT

ಮೈಸೂರು: ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣೆ ಮುಂಭಾಗವೇ ಪೊಲೀಸ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ವರದಿಯಾಗಿದೆ.

ನಂಜನಗೂಡು ತಾಲೂಕು ಸಿಂದುವಳ್ಳಿ ಗ್ರಾಮದ ಅಭಿ(25)  ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

ಈತ ನಂಜನಗೂಡಿನಿಂದ ಗುಂಡ್ಲುಪೇಟೆ- ಊಟಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ  ಸಿಂಧುವಳ್ಳಿ ಗ್ರಾಮಕ್ಕೆ ತನ್ನ ಬೈಕ್ ನಲ್ಲಿ ತೆರಳುವ ವೇಳೆ ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣೆ ಒಳಗಿನಿಂದ ಬಂದ ಪೊಲೀಸ್ ಜೀಪ್ ಢಿಕ್ಕಿ ಹೊಡೆದಿದೆ. ಇದರಿಂದ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.

ಈ ಸ್ಥಳದಲ್ಲಿ ಕೆ.ಎಚ್.ಬಿ ಕಾಲೋನಿಗೆ ತಿರುಗುವ ಮಾರ್ಗ ಇದ್ದು, ಸಾಕಷ್ಟು ಅವಘಡಗಳು ಉಂಟಾಗಿವೆ. ಈ ಜಾಗದಲ್ಲಿ ಬ್ಯಾರಿಕೇಡ್ ಅಥವಾ ಇನ್ನಿತರೆ ಕ್ರಮಗಳನ್ನು ಪೊಲೀಸರು ಕೈಗೊಳ್ಳದಿರುವುದೆ ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Similar News