ಉದಯಪುರ: ಬಜರಂಗದಳದ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

Update: 2023-02-07 07:07 GMT

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಸೋಮವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಬಜರಂಗದಳದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಮೃತ, ರಾಜು ರಾಜೇಂದ್ರ ಪರ್ಮಾರ್, (38 ವರ್ಷ) ಜಾಗದ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು,  ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದರು. ಅಂಬಾಮಠ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಪರ್ಮಾರ್ ನನ್ನು ಬಾರ್‌ಗೆ ಕರೆಸಲಾಯಿತು ಹಾಗೂ  ಹತ್ತಿರದಿಂದಲೇ ತಲೆಗೆ ಗುಂಡು ಹಾರಿಸಲಾಯಿತು. ಎಂಬಿ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ದೃಶ್ಯಗಳಲ್ಲಿ ಇಬ್ಬರು ಯುವಕರು ಓಡುತ್ತಿರುವ ದೃಶ್ಯ ಕಂಡು ಬಂದಿದೆ. ಪರ್ಮಾರ್ ಮೇಲೆ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಪರ್ಮಾರ್ ಅವರ ತಲೆಗೆ ಸಮೀಪದಿಂದ ಗುಂಡು ಹಾರಿಸಲಾಗಿದೆ. ಸಮೀಪದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದರಿಂದ ಜನರಿಗೆ ಗುಂಡಿನ ಸದ್ದು ಕೇಳಿಸಲಿಲ್ಲ. ಸ್ವಲ್ಪ ಸಮಯದ ನಂತರ ಜನರು ಪರ್ಮಾರ್ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡರು.

Similar News