ಮಂಜೇಶ್ವರ: ನೀರಿನ ಟ್ಯಾಂಕ್ ಸ್ವಚ್ಚಗೊಳಿಸುತ್ತಿದ್ದಾಗ ಕೆಳಗೆ ಬಿದ್ದು ಯುವಕ ಮೃತ್ಯು

Update: 2023-02-07 15:12 GMT

ಮಂಜೇಶ್ವರ: ನೀರಿನ ಟ್ಯಾಂಕ್ ಸ್ವಚ್ಚಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಮಂಜೇಶ್ವರದಲ್ಲಿ ನಡೆದಿದೆ.

ಮಂಜೇಶ್ವರ ಕರೋಡದ ಫವಾಝ್ (21) ಮೃತಪಟ್ಟ ಯುವಕ. ಮಂಜೇಶ್ವರ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇವರು ಶಾಲೆಯ ಬಸ್ಸಿನ ನೌಕರರಾಗಿದ್ದರು ಎಂದು ತಿಳಿದು ಬಂದಿದೆ.

ಶಾಲೆಯ ಕಟ್ಟಡ ಮೇಲೆ ಇರುವ ನೀರಿನ ಟ್ಯಾಂಕ್ ಸ್ವಚ್ಚಗೊಳಿಸಲು ಫವಾಝ್ ಮತ್ತು ಇನ್ನೋರ್ವ ಮೇಲಕ್ಕೆರಿದ್ದರು. ಈ ಸಂದರ್ಭದಲ್ಲಿ ಫವಾಝ್ ಕಾಲು ಜಾರಿ ಕೆಳಗೆ ಬಿದ್ದಿದ್ದು, ಕೂಡಲೇ ಶಾಲಾ ಸಿಬಂದಿಗಳು, ನಾಗರಿಕರು ಫವಾಝ್ ನನ್ನು ಆಸ್ಪತ್ರೆ ಗೆ ತಲುಪಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು.

ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News