ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿಗೆ ಕೃತಿಗಳ ಆಹ್ವಾನ

Update: 2023-02-08 08:21 GMT

ಬೆಂಗಳೂರು, ಫೆ.8: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ (ಲಿ), ಬೆಂಗಳೂರು ಇವರು ನೀಡುವ ಕಥಾಸಂಕಲನ ಪ್ರಶಸ್ತಿಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ.

2022ನೇ ಸಾಲಿನಲ್ಲಿ ಪ್ರಕಟವಾದ ಮೊದಲ ಮುದ್ರಣದ ಕಥಾ ಸಂಕಲನಗಳ ಪ್ರಕಾಶಕರು ಅಥವಾ ಲೇಖಕರು ಕೃತಿಯ ಮೂರು ಪ್ರತಿಗಳನ್ನು ಅಧ್ಯಕ್ಷರು, ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ (ರಿ), ನಂ.15, 2ನೇ ಅಡ್ಡರಸ್ತೆ, ನಿಸರ್ಗ ಬಡಾವಣೆ, ಉಲ್ಲಾಳ ಆರ್.ಟಿ.ಓ. ಕಚೇರಿ ಹತ್ತಿರ, ಬೆಂಗಳೂರು-560091, ಮೊ.ಸಂ.: 99803 05837 ಇಲ್ಲಿಗೆ ಕಳುಹಿಸಿಕೊಡಬೇಕು.

ಕೃತಿಗಳನ್ನು ಕಳುಹಿಸಿಕೊಡಲು ಮಾರ್ಚ್ 25 ಕೊನೆಯ ದಿನವಾಗಿರುತ್ತದೆ.

 ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನ, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಜೂನ್ ತಿಂಗಳಲ್ಲಿ ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷೆ ಎಚ್.ಆರ್.ಸುಜಾತಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News