ಸುರತ್ಕಲ್| ಫಾಝಿಲ್ ಸಹೋದರನಿಗೆ ತಂಡದಿಂದ ಹಲ್ಲೆ ಪ್ರಕರಣ: ದೂರು-ಪ್ರತಿದೂರು ದಾಖಲು

Update: 2023-02-09 04:39 GMT

ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಅವರ ಸಹೋದರನಿಗೆ ತಂಡದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿರುವುದಾಗಿ ವರದಿಯಾಗಿದೆ.

ಕಾಟಿಪಳ್ಳದ ನಿವಾಸಿಗಳಾದ ಪ್ರೀತಂ ಶೆಟ್ಟಿ, ಆಕಾಶ್, ಪ್ರಕಾಶ್, ಬಂಟ್ವಾಳದ ಹರ್ಷಿತ್ ಸೇರಿ ಐವರಿದ್ದ ತಂಡ ಹಲ್ಲೆ, ಕೊಲೆ ಬೆದರಿಕೆ ಹಾಕಿರುವುದಾಗಿ ಗಾಯಾಳು ಆದಿಲ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಮಂಗಳಪೇಟೆಯ ನಿವಾಸಿಗಳಾದ ಆದಿಲ್ ಮೆಹರೂಫ್, ಉಮರ್ ಫಾರೂಕ್, ಅಬ್ದುಲ್ ಹಮೀದ್, ಉಮರ್ ಫಾರೂಕ್ ಎಂಬವರು ಹಲ್ಲೆ, ಕೊಲೆ ಬೆದರಿಕೆ ಹಾಕಿರುವುದಾಗಿ ನಾಗೇಶ್ ದೇವಾಡಿಗ ಎಂಬವರ ಪ್ರತಿ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಸಹೋದರನಿಗೆ ಹಲ್ಲೆ; ಆರೋಪ

Similar News