ಬೆಂಗಳೂರು: ಆದಾಯ ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ಆತ್ಮಹತ್ಯೆ

Update: 2023-02-11 15:34 GMT

ಬೆಂಗಳೂರು, ಫೆ.11: ಆದಾಯ ತೆರಿಗೆ(ಐಟಿ) ಇಲಾಖೆಯ ಇ ಪೆಕ್ಟರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ವರದಿಯಾಗಿದೆ.

ಐಟಿ ಇನ್ಸ್‍ಪೆಕ್ಟರ್ ದೇವೇಂದ್ರ ದುಬೆ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. 

ಜ.20ರಂದು ಪತ್ನಿ ಜತೆ ಜಗಳ ಮಾಡಿಕೊಂಡು ಹೋಗಿದ್ದ ದೇವೇಂದ್ರ, ಬಳಿಕ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ನಿಗೆ  ನನ್ನ ವಾಟ್ಸಪ್ ಮೂಲಕ ಡೆತ್‍ನೋಟ್ ಕಳಿಸಿದ್ದನು. ಪತಿ ಸಂಪರ್ಕಕ್ಕೆ ಸಿಗದ ಕಾರಣ ಯಶವಂತಪುರ ಪೊಲೀಸ್ ಠಾಣೆಗೆ ಬಂದು ಜ.23ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಆದರೀಗ ದೇವೇಂದ್ರ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.

ಇದನ್ನೂ ಓದಿ: ತುಮಕೂರು: ರಸ್ತೆ ಅಪಘಾತದಲ್ಲಿ ನವದಂಪತಿ ಸ್ಥಳದಲ್ಲೇ ಮೃತ್ಯು 

Similar News