ರಾಯಚೂರು| ಕತ್ತು ಹಿಸುಕಿ ಇಬ್ಬರು ಮಕ್ಕಳ ಕೊಲೆ: ಆರೋಪಿ ತಂದೆಯ ಬಂಧನ

Update: 2023-02-12 05:46 GMT

ರಾಯಚೂರು: ಕೌಟುಂಬಿಕ ಕಲಹದಿಂದ ಕೋಪಕೊಂಡ ತಂದೆ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಜಕ್ಲೇರದೊಡ್ಡಿ ಗ್ರಾಮದ ಶಿವರಾಜ್ (5), ರಾಘವೇಂದ್ರ (3) ತಂದೆಯಿಂದಲೇ ಕೊಲೆಯಾದ ಮಕ್ಕಳು ಎಂದು ಗುರುತಿಸಲಾಗಿದೆ. ಆರೋಪಿ ತಂದೆ ಲಿಂಗಣ್ಣನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಆರೋಪಿ ಲಿಂಗಣ್ಣ ಪತ್ನಿಯೊಂದಿಗೆ ಜಗಳವಾಡಿ ಪತ್ನಿಯ ತವರು ಮನೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News