ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ನದಿಯಲ್ಲಿ ಮುಳುಗಿ ಮೃತ್ಯು

Update: 2023-02-12 08:41 GMT

ಕುಶಾಲನಗರ, ಫೆ೧೨: ಮೀನು ಹಿಡಿಯಲು ಕಾವೇರಿ ನದಿಗೆ ಇಳಿದಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಶಾಲನಗರದ ಕೂಡ್ಲೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕೂಡ್ಲುರಿನ ನಿವಾಸಿಗಳಾದ ನಾಗರಾಜ್ ಹಾಗೂ ಸತೀಶ್ ಎಂಬವರ ಪುತ್ರರಾದ ಪೃಥ್ವಿ(9), ಪ್ರಜ್ವಲ್(5) ಪ್ರಾಣ ಕಳೆದುಕೊಂಡ ಬಾಲಕರು ಎಂದು ಗುರುತಿಸಲಾಗಿದೆ.

ಮನೆಯ ಹಿಂಭಾಗದಲ್ಲಿರುವ ಕಾವೇರಿ ನದಿ ದಂಡೆಯ ಮೇಲೆ ಮೀನು ಹಿಡಿಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಬಾಲಕರು ಪರಸ್ಪರ ಅಣ್ಣ,ತಮ್ಮನ ಮಕ್ಕಳಾಗಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬಾಲಕರು ಮೃತದೇಹವನ್ನು ನೀರಿನಿಂದ ಎತ್ತಿದ್ದಾರೆ. ನಂತರ ಮೃತದೇಹಗಳನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆಗೆ‌ ಒಳಪಡಿಸಿದ್ದಾರೆ.

ಘಟನೆ ಬಗ್ಗೆ ಮಹಜರು ಪಡಿಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು, ಪ್ರಕರಣ‌ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Similar News