ಬಿಎಂಟಿಸಿ ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತ್ಯು

Update: 2023-02-14 12:34 GMT

ಬೆಂಗಳೂರು, ಫೆ.14: ಇಲ್ಲಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಬಳಿ ಬಿಎಂಟಿಸಿ ಬಸ್ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮಂಗಳವಾರ ಇಲ್ಲಿನ ಮುಖ್ಯ ರಸ್ತೆ ದಾಟಲು ಮುಂದಾಗಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ. ಸದ್ಯ ಕೆಸಿ ಜನರಲ್ ಆಸ್ಪತ್ರೆ ಮೃತದೇಹವನ್ನ ರವಾನೆ ಮಾಡಲಾಗಿದೆ.

ಬಿಎಂಟಿಸಿ ಘಟಕ 9ರಲ್ಲಿ ಕಾರ್ಯ ನಿರ್ವಹಿಸಿದ್ದು ಚಾಲಕ ಮಹಾಂತೇಶ್ ಎಂಬಾತನ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Similar News