ಪ್ರತಿ ವರ್ಷ ರೈತರ ಖಾತೆಗೆ 15,000 ರೂ. ಜಮೆ: ಜನಾರ್ದನ ರೆಡ್ಡಿ ಪಕ್ಷದ ಪ್ರಣಾಳಿಕೆ ಬಿಡುಗಡೆ

Update: 2023-02-14 17:36 GMT

ರಾಯಚೂರು: ಮುಂಬರಲಿರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ  ಅವರು ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ ಪಾದಯಾತ್ರೆ ನಡೆಸಿ, ಬಳಿಕ ಪ್ರಣಾಳಿಕೆ ಬಿಡುಗಡೆ ಮಾಡಿದರು.    

ಪಾದಯಾತ್ರೆ ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು,  ತಮ್ಮ ಪಕ್ಷದ ಪ್ರಣಾಳಿಕೆಗಳಲ್ಲಿರುವ ಕೆಲ ಅಂಶಗಳ ಬಗ್ಗೆ ಮಾಹಿತಿ ನೀಡಿದರು. 

''ಕೆಆರ್​ಪಿಪಿ ಅಧಿಕಾರಕ್ಕೆ ಬಂದರೆ ರೈತರಿಗೆ ಮೊದಲ ಆದ್ಯತೆ ನೀಡಲಾಗುವುದು. ಪ್ರತಿ ವರ್ಷ ರೈತರ ಖಾತೆಗೆ 15 ಸಾವಿರ ಹಣ ಜಮೆ ಮಾಡುತ್ತೇವೆ. ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಸಮಸ್ಯೆ ಆಲಿಸಲು ಕ್ರಮ. ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳುತ್ತೇವೆ'' ಎಂದು ಪ್ರಕಟಿಸಿದರು. 

Similar News