×
Ad

ಜೈನ್ ವಿವಿಯಲ್ಲಿ ಅಂಬೇಡ್ಕರ್ ಗೆ ಉದ್ದೇಶಪೂರ್ವಕವಾಗಿ ಅವಮಾನ: ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಪಟ್ಟು

Update: 2023-02-15 13:09 IST

ಬೆಂಗಳೂರು, ಫೆ.15: ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಅವಮಾನ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾದೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ಬೆಂಗಳೂರು ವಿವಿಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಬುಧವಾರ ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಕಿರು ಚಿತ್ರವನ್ನು ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ದೇಶಕ್ಕೆ ಸಂವಿಧಾನವನ್ನು ರಚನೆ ಮಾಡಿದ ಅಂಬೇಂಡ್ಕರ್ ಅವರಿಗೆ ಇತ್ತೀಚೆಗೆ ಉದ್ದೇಶಪೂರ್ವಕವಾಗಿ ಅವಮಾನವನ್ನು ಮಾಡಲಾಗುತ್ತಿದೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದೇ ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿದೆ. ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.

ಕಿರು ನಾಟಕವೊಂದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಬೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದ್ದು, ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನವನ್ನು ಮಾಡಿದವರ ವಿರುದ್ಧ ಹೋರಾಟ ಮಾಡುವಂತೆ ಮಾಡಿದೆ.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದ್ದು, ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನವನ್ನು ಮಾಡಿದವರ ವಿರುದ್ಧ ಹೋರಾಟ ಮಾಡುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದೆ.

ಜೈನ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆ 1989ರ ಅಡಿಯಲ್ಲಿ ಮತ್ತು ಭಾರತೀಯ ದಂಡ ಸಂಹಿತೆ 1860ರ ಅಡಿಯಲ್ಲಿ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ಕಾನೂನಿನ ಅನುಸಾರ ಕ್ರಮವನ್ನು ಕೈಗೊಳ್ಳಬೇಕು. ದೇಶದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಸರಕಾರ ಎಚ್ಚರಿಕೆಯನ್ನು ವಹಿಸಬೇಕು ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್., ಶಶಿಕುಮಾರ್ ಪಿ., ಬೈರಾಜ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೆರೆ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಾಕ್, ರಾಜೇಶ್, ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು. 

Similar News