ಕುಂದಾಪುರ | ಅಂಬ್ಯುಲೆನ್ಸ್, ಲಾರಿ, ಟಿಪ್ಪರ್ ಮಧ್ಯೆ ಸರಣಿ ಅಪಘಾತ: ಮೂವರಿಗೆ ಗಾಯ

Update: 2023-02-15 15:22 GMT

ಕುಂದಾಪುರ, ಫೆ.15: ಕೋಟೇಶ್ವರ ಬೀಜಾಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಂಬುಲೆನ್ಸ್, ಲಾರಿ ಮತ್ತು ಟಿಪ್ಪರ್ ನಡುವೆ ಫೆ.15ರಂದು ಬೆಳಗ್ಗೆ ನಡೆದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಕೊರ್ಗಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಅಂಬ್ಯುಲೆನ್ಸ್‌ಗೆ  ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಬಳಿಕ ಆಂಬುಲೆನ್ಸ್ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಟಿಪ್ಪರಿಗೆ ಹೊಡೆ ಯಿತು. ಇದರ ಪರಿಣಾಮ ಅಂಬ್ಯುಲೆನ್ಸ್‌ನಲ್ಲಿದ್ದ ಸಿದ್ದಯ್ಯ ಹೆಗ್ಡೆ, ಉದಯ ಹೆಗ್ಡೆ ಹಾಗೂ ಸುಶೀಲ ಶೆಟ್ಟಿ ಎಂಬವರು ಗಾಯಗೊಂಡು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News