ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

Update: 2023-02-15 14:28 GMT

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. 

ಬುಧವಾರ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಮೈಲಸಂದ್ರದಲ್ಲಿರುವ ನಿವಾಸ, ಎಚ್‍ಎಸ್‍ಆರ್ ಲೇಔಟ್‍ಕಚೇರಿ ಹಾಗೂ ಕೋಣನಕುಂಟೆಯಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದರು.

ಆಸ್ತಿ ಹಾಗೂ ಫ್ಯ್ಲಾಟ್ ಮಾರಾಟ ಸಂಬಂಧ ತೆರಿಗೆ ವಂಚನೆ ಆರೋಪದಡಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

''ವಿಪಕ್ಷಗಳ ಮೇಲೆ 2-3 ತಿಂಗಳು ಇಂತಹ ಐಟಿ ದಾಳಿ ನಡೆಯುತ್ತವೆ. ಚುನಾವಣೆ ಸಂದರ್ಭದಲ್ಲಿ ಇಂತಹ ಐಟಿ ದಾಳಿ ಸಾಮಾನ್ಯ, ಅದು ಯಾಕೆ ಅಂತ ಎಲ್ಲರಿಗೂ ಗೊತ್ತು''

ಎಚ್,ಡಿ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

Similar News