ಪರಿಷತ್ ಮಾಜಿ ಸದಸ್ಯ ಎಚ್.ಹೊನ್ನಪ್ಪ ನಿಧನ

Update: 2023-02-15 13:31 GMT

ಮಂಡ್ಯ, ಫೆ.15: ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಹೊನ್ನಪ್ಪ(73) ಮಂಗಳವಾರ ತಡರಾತ್ರಿ ತಾಲೂಕಿನ ಇಂಡುವಾಳು ಗ್ರಾಮದ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

1998ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಜನತಾದಳದಿಂದ ಹೊನ್ನಪ್ಪ ಅವರು ಚುನಾಯಿತರಾಗಿದ್ದರು. ಮೈಷುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ, ಪಿಇಟಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ನಂತರ, ಜನತಾ ಪರಿವಾರವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಕೆಲವರ್ಷಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರು. ಚಿಕಿತ್ಸೆ ಫಲಕಾರಿಯಗದೆ ನಿಧನರಾಗಿದ್ದಾರೆ.

ಹೊನ್ನಪ್ಪ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದು, ಬುಧವಾರ ಸಂಜೆ ಇಂಡುವಾಳು ಗ್ರಾಮದ ಅವರ ಜಮೀನಿನಲ್ಲಿ ಮೃತರ ದೇಹದ ಅಂತ್ಯಕ್ರಿಯೆ ನೆರವೇರಿತು. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.

Similar News