×
Ad

ಸಂತ ಸೇವಾಲಾಲರ ಜೀವನಶೈಲಿ, ಆದರ್ಶಗಳನ್ನು ಅಳವಡಿಸಿಕೊಳ್ಳಿ : ಮದನ್‌ ಮೋಹನ್

Update: 2023-02-15 20:42 IST

ಉಡುಪಿ, ಫೆ.15: ಸಂತ ಸೇವಾಲಾಲ್ ಅವರ ಜೀವನಶೈಲಿ ಮತ್ತು ಆದರ್ಶಗಳನ್ನು ಕಾರ್ಯಕ್ಷೇತ್ರದಲ್ಲಿ ಅಳವಡಿಸಿ ಕೊಂಡು ಜನರಿಗೆ ಉತ್ತಮ ಸೇವೆ ನೀಡುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮದನ್‌ ಮೋಹನ್ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿ ಹಾಗೂ ಏಳಿಗೆಗೆ ಪ್ರಯತ್ನಿಸಿ ದವರಲ್ಲಿ ಸೇವಾಲಾಲ್ ಕೂಡ ಒಬ್ಬರು. ಅಂತಹ ಸಮುದಾಯಗಳು ಅವರ ಆದರ್ಶಗಳನ್ನು ಅಳವಡಿಸಿಕೊಂಡು ಬೆಳೆಯಲು ಸೇವಾಲಾಲರೇ ಕಾರಣಕರ್ತರು ಎಂದರು.

ಕಾರ್ಯಕ್ರಮದಲ್ಲಿ ಸಂತ ಸೇವಾಲಾಲ್ ಬಂಜಾರ ಸಂಘದ ಜಿಲ್ಲಾದ್ಯಕ್ಷ ಕುಮಾರ ಕೆ.ಎಂ ಮಾತನಾಡಿ, ಸೇವಾಲಾಲರನ್ನು ಸದ್ಗುರು ಎಂದು ಕರೆಯುತ್ತೇವೆ. ಸದ್ಗುರು ಅಂದರೆ ಸುಳ್ಳನ್ನ ಹೇಳದೆ ಯಾವಾಗಲೂ ಸತ್ಯವನ್ನೆ ನುಡಿಯುವವರು. ಅವರು ಸಮಾಜದಲ್ಲಿನ ಅಂಧಕಾರ ಹೋಗಲಾಡಿಸಲು ಪ್ರಯತ್ನಿಸಿದರು. ಬುಡಕಟ್ಟಿನ ಜನರಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯವನ್ನು ಮೂಡಿಸಿದ ಮಹಾನ್ ದಾರ್ಶನಿಕ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಬಂಜಾರ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ,ಬಂಜಾರ ಸಂಘದ ಕಾರ‌್ಯದರ್ಶಿ ಮನೋಹರ್ ಲಮಾಣಿ ವಂದಿಸಿದರು.

Similar News