ವಿದ್ಯುಚ್ಛಕ್ತಿ ದರ ಪರಿಷ್ಕರಣೆ: ಸಾರ್ವಜನಿಕ ವಿಚಾರಣೆ
Update: 2023-02-15 21:46 IST
ಉಡುಪಿ : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಕುರಿತು ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ (ಮೆಸ್ಕಾಂ) ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಆಯೋಗವು ಫೆಬ್ರವರಿ 17 ರಂದು ಬೆಳಗ್ಗೆ ೧೦ ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸಾರ್ವಜನಿಕ ವಿಚಾರಣೆಯನ್ನು ಆಯೋಜಿಸಿದ್ದು, ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.