ಬಿಜೆಪಿಗೆ ರಾಜೀನಾಮೆ ನೀಡಿದ ಸಿ.ಟಿ.ರವಿ ಆಪ್ತ ಹೆಚ್.ಡಿ ತಮ್ಮಯ್ಯ

Update: 2023-02-16 09:37 GMT

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ ಅವರ ಆಪ್ತ ಹೆಚ್.ಡಿ ತಮ್ಮಯ್ಯ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರ. 

ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾಗಿದ್ದ ಹೆಚ್.ಡಿ ತಮ್ಮಯ್ಯ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ತಮ್ಮಯ್ಯ ಅವರು ಇತ್ತೀಚೆಗೆ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಗೆ ತೆರಳಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಮನವಿ ಸಲ್ಲಿಸಿದ್ದರು. 

ಇದೀಗ ಸದ್ಯದ ರಾಜಕೀಯ ವಿದ್ಯಾಮಾನಗಳಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. 

► ರಾಜೀನಾಮೆ ಪತ್ರದಲ್ಲೇನಿದೆ? 

ನಾನು 2007 ರಿಂದ ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಿಕೊಂಡು ಬಂದಿರುತ್ತೇನೆ. ಆದರೆ ನನಗೆ ಈಗಿನ ರಾಜಕೀಯ ವಿದ್ಯಾಮಾನಗಳಿಂದ ಬೇಸರಗೊಂಡಿದ್ದು, ಆದ್ದರಿಂದ ಜಿಲ್ಲಾ ಪ್ರಕೋಷ್ಟಕ ಸಂಯೋಜಕರ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿರುತ್ತೇನೆ. ನನಗೆ 17 ವರ್ಷಗಳಿಂದ ಸಹಕಾರ ನೀಡಿದ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಮಂಡಲ, ಮೋರ್ಚಾ ಪ್ರಕೋಷ್ಟಗಳ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಬಿಜೆಪಿಯ ಎಲ್ಲಾ ನನ್ನ ನೆಚ್ಚಿನ ಕಾರ್ಯಕರ್ತರು ಹಾಗೂ ಬಿಜೆಪಿಯ ಹಿರಿಯ ನಾಯಕರುಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

Similar News