ನೇಣು ಬಿಗಿದು ಆತ್ಮಹತ್ಯೆ

Update: 2023-02-16 16:20 GMT

ಗಂಗೊಳ್ಳಿ : ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ಮೀನುಗಾರ ರೊಬ್ಬರು ಯಾವುದೋ ಕಾರಣಕ್ಕೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ತ್ರಾಸಿ ಗ್ರಾಮದ ಹೊಸಪೇಟೆಯ ಉದಯ ಖಾರ್ವಿ (೫೦) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಯಾವುದೋ ಕಾರಣಕ್ಕೆ ಮನನೊಂದು ಮನೆಯಲ್ಲಿ ಯಾರೊಂದಿಗೂ ಮಾತನಾಡದೇ ಇದ್ದ ಇವರು,  ಫೆ.೧೫ರ ರಾತ್ರಿ ಊಟ ಮಾಡಿ ಮಲಗಿದವರು ೧೨ಗಂಟೆ ಸುಮಾರಿಗೆ ಮನೆಯ ಹಾಲ್‌ನ ಪಕ್ಕಾಸಿಗೆ ಲುಂಗಿ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News