ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
Update: 2023-02-17 18:56 GMT
ಮಡಿಕೇರಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.
ಮಡಿಕೇರಿ ಪುಟಾಣಿ ನಗರದ ನಿವಾಸಿ ಕುಮಾರೇಶ್ ಎಂಬುವವರ ಪುತ್ರಿ ಕೀರ್ತನ(17) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಮಡಿಕೇರಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಕೀರ್ತನ, ಶುಕ್ರವಾರ ಬೆಳಿಗ್ಗೆ ಬಸ್ನಲ್ಲಿ ಸೋಮವಾರಪೇಟೆಗೆ ಆಗಮಿಸಿ, ಗಾಂಧಿನಗರದಲ್ಲಿರುವ ತನ್ನ ಅಜ್ಜಿಯ ಮನೆಗೆ ತೆರಳುವ ಮಾರ್ಗ ಮಧ್ಯೆ ಚೌಡ್ಲು ಗ್ರಾಮದ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸೋಮವಾರಪೇಟೆ ಪೊಲೀಸರು ಮೃತದೇಹವನ್ನ ಕೆರೆಯಿಂದ ತೆಗೆದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.