ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ: ಸಿಎಂ ಬೊಮ್ಮಾಯಿ

Update: 2023-02-19 13:22 GMT

ಹಾವೇರಿ: ‘ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ’ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ರವಿವಾರ ಶಿಗ್ಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ರಾಮದೇವರ ಬೆಟ್ಟ ಐತಿಹಾಸಿಕವಾದುದು. ಹೊಸ ರಾಮಮಂದಿರ ನಿರ್ಮಾಣ ಮಾಡಬೇಕೆಂದು ಹಲವು ಜನರ ಇಚ್ಛೆಯಾಗಿತ್ತು. ನನ್ನ ಪ್ರಕಾರ ಯಾರೂ ಇದಕ್ಕೆ ವಿರೋಧ ಮಾಡುವುದಿಲ್ಲ. ವಿರೋಧ ಮಾಡುವವರು ವಿರೋಧಿಸಲಿ. ನನ್ನ ತಕಾರಾರಿಲ್ಲ’ ಎಂದು ಹೇಳಿದರು.

‘ಕಾಂಗ್ರೆಸ್‍ನವರು ಇಷ್ಟು ದಿನ ಜನರ ಕಿವಿಗೆ ಹೂವಿಟ್ಟಿದ್ದರು. ಸಿದ್ದರಾಮಯ್ಯ ಮಾತಿಗೆ ತಪ್ಪಿದ ಮಗ. ಬಜೆಟ್‍ನಲ್ಲಿ ಹೇಳಿದ್ದ ಯಾವುದನ್ನೂ ಅನುಷ್ಠಾನ ಮಾಡಿಲ್ಲ. ಮೊದಲು 10 ಕೆಜಿ ಅಕ್ಕಿ ಕೊಡುತ್ತೇವೆಂದರು. ಆಮೇಲೆ ಅದನ್ನು 4 ಕೆಜಿಗೆ ಇಳಿಸಿದರು. ಚುನಾವಣೆ ಸಮಯದಲ್ಲಿ 7 ಕೆಜಿಗೆ ಏರಿಸಿದರು. ಹೀಗೆ ಜನರನ್ನು ಯಾಮಾರಿಸಿದ್ದಾರೆ. ಅವರಿಗೆ ಜನ ಶಾಶ್ವತವಾಗಿ ಹೂವಿಡುವ ಕೆಲಸ ಮಾಡಲಿದ್ದಾರೆ’ ಎಂದು ಟೀಕಿಸಿದರು.

Similar News