ವಿಧಾನಸಭೆ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋಶೂಟ್: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಭಾಗಿ
Update: 2023-02-20 21:38 IST
ಬೆಂಗಳೂರು, ಫೆ.20: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು (ಸೋಮವಾರ) ವಿಧಾನಸೌಧದ ಆವರಣದಲ್ಲಿ ಶಾಸಕರ ಗ್ರೂಪ್ ಫೋಟೋ ಶೂಟ್ ನಡೆಯಿತು.
15ನೇ ವಿಧಾನಸಭೆಯ ಕೊನೇಯ ಅಧಿವೇಶನ ಹಿನ್ನಲೆ ನಡೆದ ಫೋಟೋಶೂಟ್ನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ , ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಭಾಗಿಯಾಗಿದರು.
ಗೈರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಫೋಟೋಶೂಟ್ಗೆ ಗೈರಾದರು.