ಹೈಕೋರ್ಟ್ ವಕೀಲ ವಿ. ಶ್ರೀನಿಧಿ ಹೃದಯಾಘಾತದಿಂದ ನಿಧನ

Update: 2023-02-21 16:13 GMT

ಬೆಂಗಳೂರು, ಫೆ. 21: ಕರ್ನಾಟಕ ಹೈಕೋರ್ಟ್‍ನಲ್ಲಿ ಸರಕಾರಿ ವಕೀಲರಾಗಿದ್ದ ವಿ.ಶ್ರೀನಿಧಿ(46) ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ತಾಳವಟ್ಟಿ ಗ್ರಾಮದ ಶ್ರೀನಿಧಿ ಕಳೆದ ಎಂಟು ವರ್ಷಗಳಿಂದ ಸರಕಾರದ ಪರ ಮತ್ತು ಬಿಬಿಎಂಪಿ ಪರ ವಕೀಲರಾಗಿ ಮಹತ್ವದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. 

ಒತ್ತುವರಿ ತೆರವು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದ ಕೇಸ್‍ಗಳಲ್ಲಿ ಶ್ರೀನಿಧಿ ಅವರು ಬಿಬಿಎಂಪಿ ವಕೀಲರಾಗಿ ಅನೇಕ ಬಾರಿ ಕಠಿಣ ಸನ್ನಿವೇಶಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. 

Similar News