ವಿಜಯಪುರ: ಶಿಕ್ಷಕಿಯ ಹತ್ಯೆ, ಪುತ್ರನ ಮೇಲೆ ಮಾರಣಾಂತಿಕ ಹಲ್ಲೆ

Update: 2023-02-21 17:39 GMT

ವಿಜಯಪುರ: ಹಾಡುಹಗಲೇ ಶಾಲಾ ಶಿಕ್ಷಕಿಯೊಬ್ಬರನ್ನು ಹತ್ಯೆಗೈದಿರುವ ಘಟನೆ ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ.

ಕೊಲೆಯಾದ ಶಿಕ್ಷಕಿಯನ್ನು ಪಟ್ಟಣದ ಅಂಜುಮನ್ ನಗರದ ದಿಲ್ಶಾದಾ ಹವಾಲ್ದಾರ್ (31) ಎಂದು ಗುರುತಿಸಲಾಗಿದೆ. ಶಿಕ್ಷಕಿ ತಾಲೂಕಿನ ಲಾಳಸಂಗಿ ಗ್ರಾಮದ ಎಚ್.ಪಿ.ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಶಿಕ್ಷಕಿಯ ಮಗನ ಮಾರಣಾಂತಿಕ ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ಆತನ ಕೈ ಹಾಗೂ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿವೆ. ಅದೃಷ್ಠವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Similar News