×
Ad

ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ: ಕುಮಾರಸ್ವಾಮಿ ತಿರುಗೇಟು

Update: 2023-02-22 18:33 IST

ಶಿವಮೊಗ್ಗ, ಫೆ.22:ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನಿಡಿದ್ದಾರೆ.

ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿಕೆಗೆ ಶಿವಮೊಗ್ಗದಲ್ಲಿ ತಿರುಗೇಟು ನೀಡಿದರು. ನನ್ನ ವಿರುದ್ಧ ಆ ರೀತಿಯ ಮಾತು ಹೇಳಲು ಸುರ್ಜೇವಾಲ ಅವರಿಗೆ ನಾಚಿಕೆಯಾಗಬೇಕು. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ. ಕಾಂಗ್ರೆಸ್? ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ. ಕಾಂಗ್ರೆಸ್ ಬಿಜೆಪಿಯ ಬಿ ಟೀಮೋ ಜೆಡಿಎಸ್ ಬಿ ಟೀಮೋ ಎಂಬ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು  ಹೇಳಿದರು.

ಅಶ್ವತ್ಥನಾರಾಯಣ ವಿರುದ್ಧ ಕಿಡಿ:

ಸಚಿವ ಅಶ್ವತ್ಥ ನಾರಾಯಣ ಅವರು ಹಾರೋಹಳ್ಳಿ ತಾಲೂಕು ಉದ್ಘಾಟನೆ ಸಮಾರಂಭದಲ್ಲಿ ನಡೆದುಕೊಂಡ ರೀತಿ ಸರಿಯಿಲ್ಲ. ಹೋಮ ನಡೆಯುತ್ತಿದ್ದ ಜಾಗಕ್ಕೂ ಹೋಗದೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಸರಿಯಲ್ಲ ಎಂದು ಕುಮಾರಸ್ವಾಮಿ  ಹೇಳಿದರು.

Similar News