×
Ad

ಕಡಬ: ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿ, ಪೊಲೀಸರಿಗೆ ಕಿಡಿಗೇಡಿಗಳಿಂದ ಹಲ್ಲೆ

Update: 2023-02-23 23:23 IST

ಕಡಬ: ಕಾಡಾನೆಯೊಂದನ್ನು ಸೆರೆ ಹಿಡಿದ ನಂತರ ಉಳಿದ ಆನೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಿಡಿಗೇಡಿಗಳು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ವರದಿಯಾಗಿದೆ.

ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದ್ದು, ಇದಕ್ಕೊಪ್ಪದ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಕಿಡಿಗೇಡಿಗಳು ಇಲಾಖೆಯ ವಾಹನಗಳಿಗೆ ಹಾನಿ ಉಂಟುಮಾಡಿ, ಅಧಿಕಾರಿಗಳಿಗೆ ಹಲ್ಲೆಗೈದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Similar News