×
Ad

ತಿರುವನಂತಪುರ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ

Update: 2023-02-24 13:01 IST

ತಿರುವನಂತಪುರ (ಕೇರಳ): ಹೈಡ್ರಾಲಿಕ್ ವೈಫಲ್ಯದ ಶಂಕೆಯ ಮೇರೆಗೆ ಕ್ಯಾಲಿಕಟ್‌ನಿಂದ ದಮ್ಮಾಮ್‌ಗೆ ತೆರಳುತ್ತಿದ್ದ ವಿಮಾನವನ್ನು ರಾಜ್ಯ ರಾಜಧಾನಿಗೆ ಡೈವರ್ಟ್ ಮಾಡಿದ ನಂತರ ಶುಕ್ರವಾರ ಇಲ್ಲಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ವಿಮಾನವು ಮಧ್ಯಾಹ್ನ 12.15 ಕ್ಕೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

182 ಪ್ರಯಾಣಿಕರನ್ನು ಹೊತ್ತಿದ್ದ ಏರ್-ಇಂಡಿಯಾ ಎಕ್ಸ್‌ಪ್ರೆಸ್ IX 385 ನ ತುದಿ ಭಾಗವು ಬೆಳಿಗ್ಗೆ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್-ಆಫ್ ಆಗುವ ಸಮಯದಲ್ಲಿ ರನ್‌ವೇಗೆ ಅಪ್ಪಳಿಸಿತು ಎಂದು ಮೂಲಗಳು ತಿಳಿಸಿವೆ.

ಸುರಕ್ಷಿತ ಲ್ಯಾಂಡಿಂಗ್‌ಗೆ ಅನುಕೂಲವಾಗುವಂತೆ ಅರಬ್ಬಿ ಸಮುದ್ರದ ಮೇಲೆ ಇಂಧನವನ್ನು ಸುರಿದ ನಂತರ ವಿಮಾನವು ವಿಮಾನ ನಿಲ್ದಾಣದಲ್ಲಿ ಇಳಿಯಿತು ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ವಿಮಾನ ನಿಲ್ದಾಣದ ಮ್ಯಾನೇಜ್ ಮೆಂಟ್  ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಿತು.

Similar News