ನಿಮ್ಮ ಧ್ವನಿ ವಿಧಾನಸೌಧದಲ್ಲಿ ಮೊಳಗಿದೆ: ಬಿಎಸ್‍ವೈಗೆ ಶುಭ ಹಾರೈಸಿದ ಎಸ್ಸೆಂ ಕೃಷ್ಣ

Update: 2023-02-24 13:04 GMT

ಬೆಂಗಳೂರು, ಫೆ. 24: ‘ನಾಲ್ಕು ದಶಕಗಳ ಸುಧೀರ್ಘ ರಾಜಕೀಯ ಜೀವನದಲ್ಲಿ ಹಲವು ಏಳು ಬೀಳುಗಳನ್ನು ಕಂಡು ರೈತಾಪಿ ವರ್ಗದ ಪರವಾಗಿ ಅಹರ್ನಿಶಿ ಹೋರಾಟ ನಡೆಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ದೂರ ಸರಿದು ಯುವ ಸಮೂಹಕ್ಕೆ ಮಾರ್ಗದರ್ಶಕರಾಗಲು ನಿಶ್ಚಯಿಸಿರುವ ತಮ್ಮ ನಿರ್ಧಾರವನ್ನು ಮಾಜಿ ಸಿಎಂ ಎಸ್ಸೆಂ ಕೃಷ್ಣ ಸ್ವಾಗತಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ‘ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ನಡುಗುವುದು’ ಎನ್ನುವ ಮಟ್ಟಿಗೆ ನಿಮ್ಮ ಧ್ವನಿ ವಿಧಾನಸೌಧದಲ್ಲಿ ಮೊಳಗಿದೆ. ನಾವಿಬ್ಬರೂ ಒಂದೇ ಜಿಲ್ಲೆಯಿಂದ ಬಂದವರಾದರೂ ತಾವು ಶಿಕಾರಿಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು ರಾಜ್ಯದ ಎಲ್ಲ ಕಡೆ ಸಂಚರಿಸಿ ಪಕ್ಷ ಅಧಿಕಾರಕ್ಕೆ ತಂದು ಹಲವು ಯುವನಾಯಕರನ್ನು ಸೃಷ್ಠಿಸಿ ಯಶಸ್ವಿ ನಾಯಕರಾಗಿ ಚುನಾವಣಾ ರಾಜಕೀಯದಿಂದ ವಿರಮಿಸುತ್ತಿರುವ ತಮಗೆ ದೇವರು ಆಯಸ್ಸು ಆರೋಗ್ಯ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ನಿಮ್ಮ ಸೇವೆ ಬೇರೆ ರೂಪದಲ್ಲಿ ರಾಜ್ಯದ ಜನರಿಗೆ ದೊರೆತು ಸಮಾಜದ ಶ್ರೇಯೋಭಿವೃದ್ಧಿಗೆ ಅನುವಾಗಲಿ, ತಮ್ಮ ಮುಂದಿನ ನಡೆ ಯುವಜನಾಂಗಕ್ಕೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದು ಕೃಷ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Full View

Similar News