ಮಳೆಯಿಂದ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಅನುದಾನ ಬಿಡುಗಡೆ: ಸಚಿವ ಎಂಟಿಬಿ ನಾಗರಾಜ್
Update: 2023-02-24 17:22 GMT
ಬೆಂಗಳೂರು, ಫೆ.24: ರಾಜ್ಯಾದಾದ್ಯಂತ ಮಳೆಯಿಂದ ಹಾಳಾಗಿರುವ ರಸ್ತೆಗಳ ದುರಸ್ತಿಗೆ ಪಾರದರ್ಶಕವಾಗಿ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಆಡಳಿತ ಪಕ್ಷದ ಸದಸ್ಯ ಅಪ್ಪಚ್ಚು ರಂಜನ್ ಪರವಾಗಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರೋತ್ಥಾನ ಯೋಜನೆ ಸೇರಿದಂತೆ ವಿವಿಧ ಅನುದಾನಗಳನ್ನು ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯಾನುಸಾರ ಹಾಗೂ ನಿಯಮಾನುಸಾರ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.