ಕಲಬುರಗಿ | ಸಿಯುಕೆ ಆವರಣದಲ್ಲಿ ಬೆಂಕಿ: ಮರ, ಪ್ರಾಣಿ–ಪಕ್ಷಿಗಳು ಭಸ್ಮ

Update: 2023-02-27 17:21 GMT

ಕಲಬುರಗಿ: ನಗರ ಹೊರವಲಯದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.  ಆವರಣದಲ್ಲಿ ಸಸ್ಯ ಸಂಪತ್ತು, ಗಿಡ ಮರಗಳು ನಾಶವಾಗಿ ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮವಾಗಿವೆ.

'ಕೆಲ ಕಿಡಿಗೇಳಿದಂದ ಉದ್ದೇಶ ಪೂರ್ವಕವಾಗಿ ಮತ್ತು ವ್ಯವಸ್ಥಿತವಾಗಿ ಬೆಂಕಿ ಹಚ್ಚಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಇಂತಹ ಕೃತ್ಯ ನಡೆಯುತ್ತಿವೆ' ಎಂದು ಸಿಯುಕೆ ಬಸವ ಪೀಠದ ಸಂಯೋಜಕ ಡಾ. ಗಣಪತಿ ಬಿ ಸಿನ್ನೂರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

'ಸೋಮವಾರ ಏಕಕಾಲದಲ್ಲಿ ಮೂರು ಕಡೆ ಬೆಂಕಿಹಚ್ಚಿದರಿಂದ ಬೆಂಕಿಯ ಕೆನ್ನಾಲಿಗೆ 4–5 ಅಡಿ ಎತ್ತರ ಚಾಚಿಕೊಂಡಿದೆ. ಈ ಬಗ್ಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಗಮನಕ್ಕೆ ತರಲಾಗುವುದು' ಎಂದು ತಿಳಿಸಿದ್ದಾರೆ.

Similar News