ಕೊನೆಯ ಚುನಾವಣೆ ಎಂದಿರುವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2023-02-28 05:46 GMT

ಹುಬ್ಬಳ್ಳಿ: ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೆಂದು ತಿಳಿದಿಲ್ಲ. ಅವರದ್ದು ನಿವೃತ್ತಿಯಾಗುವ ವಯಸ್ಸಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಇದು ತಮ್ಮ ಕೊನೆಯ ಚುನಾವಣೆ ಎಂದಿರುವ ಬಗ್ಗೆ ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಅವರದ್ದು ನಿವೃತ್ತಿ ಯಾಗುವ ವಯಸ್ಸಲ್ಲ. ಬಹಳ ಸೇವೆಯನ್ನು ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ರೀತಿಯದ್ದೂ ನಡೆಯುತ್ತದೆ. ಪ್ರತಿ ಚುನಾವಣೆಗೂ ಜನರ ಪ್ರಬುದ್ಧತೆ ಹೆಚ್ಚಾಗಿದೆ. ನಾವು ಮಾತನಾಡುವಾಗ ಅದರ ಹಿಂದಿನ ಚಿಂತನೆ, ಕಲ್ಪನೆ ಜನರಿಗೆ ತಿಳಿಯುತ್ತದೆ ಎಂದರು.

Similar News