ರಾಷ್ಟ್ರಮಟ್ಟದ ಯುವಜನೋತ್ಸವ: ಮಂಗಳೂರು ವಿವಿ ವಿದ್ಯಾರ್ಥಿಗಳು ಅಂತರ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ

Update: 2023-02-28 11:45 GMT

ಕೊಣಾಜೆ: ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದಲ್ಲಿ ಫೆ.24ರಿಂದ28ರವರೆಗೆ ನಡೆದ ರಾಷ್ಟ್ರ ಮಟ್ಟದ ಯುವ ಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರತಿನಿಧಿಸಿದ ವಿದ್ಯಾರ್ಥಿಗಳು ಏಕಾಂಕ ನಾಟಕದಲ್ಲಿ ದ್ವಿತೀಯ,  ಜಾನಪದ ವಾದ್ಯವೃಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಅಂತರ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧನೆಗೈದ  ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯದ  ಕುಲಪತಿಗಳಾದ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, ಕುಲಸಚಿವರಾದ ಪ್ರೊ. ಕಿಶೋರ್ ಕುಮಾರ್, ಸಿ ಕೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರಾದ ಡಾ. ಪರಮೇಶ್ವರ  ಅವರು ವಿದ್ಯಾರ್ಥಿಗಳಿಗೆ ಹಾಗೂ ಆಳ್ವಾಸ್ ಕಾಲೇಜ ಮೂಡಬಿದ್ರೆ ಹಾಗೂ ಗೋವಿಂದ ದಾಸ್ ಕಾಲೇಜ ಸುರತ್ಕಲ್ ಆಡಳಿತ ಮಂಡಳಿಗೆ  ಅಭಿನಂದನೆಗಳನ್ನು ಸಲ್ಲಿಸಿದ್ದಾರೆ‌.

Similar News