ಮಂಗಳೂರು | ಅಕ್ರಮ ಮರಳು ಸಾಗಾಟ ಪತ್ತೆ: ಮರಳು ಸಹಿತ ಲಾರಿಗಳ ಜಪ್ತಿ

Update: 2023-03-01 09:25 GMT

ಮಂಗಳೂರು, ಮಾ.1: ಕುಲದೀಪ್ ಕುಮಾರ್ ಆರ್. ಜೈನ್ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾನೂನುಬಾಹಿರ ಕೃತ್ಯಗಳ ನಿಯಂತ್ರಣಕ್ಕೆ ವ್ಯಾಪಕ ಕ್ರಮಕ್ಕೆಮುಂದಾಗಿದ್ದು, ಅಕ್ರಮ ಮರಳುಗಾರಿಕೆ ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಆರ್.ಪಿ.ಎಲ್. ಮೇಲ್ಸೇತುವೆ ಬಳಿ ಫೆ.25ರಂದು ಸುಮಾರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಟನ್ ಮರಳು  ಸಹಿತ 2 ಲಾರಿಗಳನ್ನು ಹಾಗೂ ಫೆ.26ರಂದು ತಣ್ಣೀರುಬಾವಿ ರಸ್ತೆಯಲ್ಲಿ ಸುಮಾರು 12-15 ಟನ್ ಮರಳನ್ನು ಹಾಗೂ ಅದರ ಸಾಗಾಟಕ್ಕೆ ಬಳಸಿದ 2 ಲಾರಿಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ಸಾಗಣೆ ಸಂಬಂಧ ಹೆಚ್ಚಿನ ತನಿಖೆಗಾಗಿ ಮರಳು ಸಹಿತ ಲಾರಿಗಳನ್ನು ಮುಂದಿನ ತನಿಖೆಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಸುಪರ್ದಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News