ಡಾ. ರಾಮಾನುಜಂ

Update: 2023-03-01 16:52 GMT

ಕೊಣಾಜೆ: ದೇರಳಕಟ್ಟೆ ಸಮೀಪದ ನಾಟೆಕಲ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ಪಿ.ರಾಮಾನುಜಂ ಅವರು (79) ಅವರು ಬುಧವಾರ ನಿಧನರಾದರು.

ಇವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.

ಬಿಲ್ಲವ ಸೇವಾ ಸಮಾಜ (ರಿ ) ಕೊಲ್ಯ  ಸೋಮೇಶ್ವರ, ಇದರ ಅಧ್ಯಕ್ಷರಾಗಿಯೂ, ಗೌರವ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿಯವರ ನಿಕಟವರ್ತಿಯೂ ಆಗಿ ಅನೇಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಶಾಸಕ ಯು.ಟಿ.ಖಾದರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Similar News

ವಸಂತಿ