ಸಚಿವ ನಾರಾಯಣಗೌಡ ಕಾಂಗ್ರೆಸ್‌ಗೆ ಹೋಗಲ್ಲ: ಪ್ರಹ್ಲಾದ್ ಜೋಶಿ

Update: 2023-03-03 18:03 GMT

ಮಂಡ್ಯ: ಪ್ರಸ್ತುತ ಪಕ್ಷ ಸಂಘಟನೆ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಚೆನ್ನಾಗಿ ಆಗಲಿದೆ. ಬಿಜೆಪಿಯ ಸಚಿವರಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಶುಕ್ರವಾರ ಗೆಜ್ಜಲಗೆರೆ ಕಾಲನಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು,   ಸಚಿವ ನಾರಾಯಣಗೌಡರು ನಮ್ಮ ಜತೆಯಲ್ಲೇ ಇರುತ್ತಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವುದಿಲ್ಲ. ಹಾಗೆಯೇ ವೈಯಕ್ತಿಕ ಕಾರಣಕ್ಕೆ ಸಚಿವ ಸೋಮಣ್ಣ ಅವರು ಒಂದು ಕಾರ್ಯಕ್ರಮಕ್ಕೆ ಬರಲಿಲ್ಲ. ಸಚಿವ ಅಶೋಕ್ ಅವರೇ ಜಿಲ್ಲಾ ಉಸ್ತುವಾರಿ ಬೇಡವೆಂದಿದ್ದು, ನಾರಾಯಣಗೌಡ, ಗೋಪಾಲಯ್ಯ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.

Similar News