ಜಗಳ ಬಿಡಿಸಲು ಬಂದ ವ್ಯಕ್ತಿಯನ್ನೇ ಇರಿದು ಕೊಂದ ದುಷ್ಕರ್ಮಿಗಳು: ಇಬ್ಬರ ಬಂಧನ

Update: 2023-03-04 18:02 GMT

ಮುಂಬೈ: ಜಗಳ ಬಿಡಿಸಲು ಬಂದ 56 ವರ್ಷದ ವ್ಯಕ್ತಿಯನ್ನು ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದು ಕೊಂದ ಘಟನೆ ಮುಂಬೈನ ಉಪನಗರ ಸಿಯೋನ್‌ನಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಬ್ಬರು ಬೆಳಗ್ಗೆ ಪಂಜಾಬಿ ಕಾಲೋನಿ ಪ್ರದೇಶದ ಬೈಲೇನ್‌ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದಾಗ ಮೃತ ವ್ಯಕ್ತಿಯ ಸಹೋದ್ಯೋಗಿ ನೋಡಿ ನಗುತ್ತಿದ್ದರು ಎಂದು ಅವರ ಮೇಲೆಯೂ ಹಲ್ಲೆ ನಡೆಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕೊಲೆ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತ ವ್ಯಕ್ತಿ ಮತ್ತು ಅವರ ಸ್ನೇಹಿತ ಬೈಲೇನ್ ಮೂಲಕ ಹಾದು ಹೋಗುತ್ತಿದ್ದಾಗ ಬೆಳಿಗ್ಗೆ ಈ ಘಟನೆ ಸಂಭವಿಸಿದೆ.

ಇಬ್ಬರನ್ನು ಜಗಳವಾಡದಂತೆ ಸಂತ್ರಸ್ತ ಕೇಳಿಕೊಂಡಿದ್ದು, ಇದರಿಂದ ಕುಪಿತಗೊಂಡ ಒಬ್ಬಾತ ಸಂತ್ರಸ್ತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪೊಲೀಸರ ನೆರವಿನೊಂದಿಗೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

Similar News