ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿ ಸೇರಲ್ಲ: ಗಾಲಿ ಜನಾರ್ದನರೆಡ್ಡಿ

Update: 2023-03-05 16:00 GMT

ಬೆಂಗಳೂರು, ಮಾ.5: ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳಲ್ಲ. ಮುಂದೆ ಇಟ್ಟ ಹೆಜ್ಜೆ ಹಿಂದೆ ತೆಗೆಯುವವನು ಶೂರನು ಅಲ್ಲ, ಧೀರನು ಅಲ್ಲ. ಹೆಜ್ಜೆ ಹಿಂದಿಡುವ ಪ್ರಶ್ನೆಯೇ ಇಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನರೆಡ್ಡಿ ಹೇಳಿದ್ದಾರೆ.

ರವಿವಾರ ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನೋ ಸೋಲಿಸಲು ನಾನು ಪಕ್ಷ ಕಟ್ಟಿಲ್ಲ. ಗೆಲ್ಲುವ ಕಡೆಗಳಲ್ಲಿ ಮಾತ್ರ ಹೆಜ್ಜೆ ಇಡುತ್ತಿದ್ದೇನೆ. ಎದುರಾಳಿ ಯಾರು ಎನ್ನುವುದನ್ನು ನಾನು ಯೋಚನೆ ಮಾಡುವುದಿಲ್ಲ ಎಂದು ಹೇಳಿದರು. 

ರಾಜ್ಯದ 30 ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆ ಬಂದಿದೆ. ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಫಲಿತಾಂಶ ಜನರ ಕೈಯಲ್ಲಿದೆ ಎಂದು ತಿಳಿಸಿದರು. 

Similar News